ಖಾಸಗಿ ಕಂಪನಿಗಳಲ್ಲಿ ಸ್ಥಳೀಯರ ಪ್ರತಿಭಾವಂತ ಯುವಜನರಿಗೆ ಉದ್ಯೋಗ ದೊರೆಯುತ್ತಿಲ್ಲ ಎಂಬುದು ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಇರುವ ಸಮಸ್ಯೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಂಡು ಸ್ಥಳೀಯ ಯುವಜನತೆಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಮಹತ್ವದ ಕಾಯ್ದೆಗೆ ಆಂಧ್ರ ವಿಧಾನಸಭೆ ಅನುಮೋದನೆ ನೀಡಿದೆ.
ಅಮರಾವತಿ: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರ ಪ್ರತಿಭಾವಂತ ಯುವಜನರಿಗೆ ಉದ್ಯೋಗ ದೊರೆಯುತ್ತಿಲ್ಲ ಎಂಬುದು ದೇಶದಲ್ಲಿ ಬಹುತೇಕ ರಾಜ್ಯಗಳಲ್ಲಿ ಇರುವ ಸಮಸ್ಯೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಂಡು ಸ್ಥಳೀಯ ಯುವಜನತೆಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಮಹತ್ವದ ಕಾಯ್ದೆಗೆ ಆಂಧ್ರ ವಿಧಾನಸಭೆ ಅನುಮೋದನೆ ನೀಡಿದೆ.
ಈ ಮೂಲಕ ಖಾಸಗಿ ಕಂಪನಿಗಳಲ್ಲಿ ಶೇ. 75 ರಷ್ಟು ಉದ್ಯೋಗವನ್ನು ಸ್ಥಳೀಯ ಯುವಜನತೆಗೆ ಮೀಸಲಿಟ್ಟ ಮೊದಲ ರಾಜ್ಯ ಎಂಬ ಗೌರವಕ್ಕೆ ಆಂಧ್ರಪ್ರದೇಶ ಪಾತ್ರವಾಗಿದೆ.
ಆಂಧ್ರ ಪ್ರದೇಶ ವಿಧಾನಸಭೆ ಮಂಗಳವಾರ ‘ಕೈಗಾರಿಕೆಗಳು / ಕಾರ್ಖಾನೆಗಳಲ್ಲಿ ಆಂಧ್ರಪ್ರದೇಶ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸುವ ಕಾಯ್ದೆ, 2019’ ಕ್ಕೆ ಅನುಮೋದನೆ ನೀಡಿದೆ. ಇದರ ಅನ್ವಯ ಆಂಧ್ರಪ್ರದೇಶದಲ್ಲಿರುವ ಎಲ್ಲಾ ಖಾಸಗಿ ಕಂಪನಿಗಳು, ಖಾಸಗಿ ಯೋಜನೆಗಳು, ಜಂಟಿ ಸಂಸ್ಥೆಗಳು ತಮ್ಮಲ್ಲಿರುವ ಉದ್ಯೋಗದಲ್ಲಿ ಸ್ಥಳೀಯ ಯುವಜತೆಗೆ ಶೇ. 75 ಮೀಸಲಾತಿ ನೀಡಬೇಕು.
ಜಗನ್ ಮೋಹನ್ ರೆಡ್ಡಿ ಅವರು ಚುನಾವಣೆ ಪ್ರಚಾರ ಸಂದರ್ಭದಲ್ಲಿ ಸ್ಥಳೀಯ ಯುವಜನತೆಗೆ ಉದ್ಯೋಗ ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆಗ ನೀಡಿದ್ದ ಭರವಸೆಯನ್ನು ಜಗನ್ ಈಗ ಈಡೇರಿಸಿದ್ದಾರೆ.
ಹೊಸ ಕಾಯ್ದೆಯನ್ವಯ ಆಂಧ್ರದಲ್ಲಿರುವ ಕಂಪನಿಗಳಿಗೆ ನುರಿತ ಸ್ಥಳೀಯ ಕೆಲಸಗಾರರು ಸಿಗದಿದ್ದಲ್ಲಿ, ಯುವಜನತೆಗೆ ತರಬೇತಿ ನೀಡಿ ಉದ್ಯೋಗ ನೀಡಬೇಕಾಗುತ್ತದೆ. ಈ ಮೂಲಕ ಖಾಸಗಿ ಕಂಪನಿಗಳ ಸ್ಥಾಪನೆಗಾಗಿ ಭೂಮಿ ಕಳೆದುಕೊಂಡವರು ಹಾಗೂ ತಮ್ಮ ಉದ್ಯೋಗ ಕಳೆದುಕೊಂಡವರಿಗೆ ಅನುಕೂಲವಾಗಲಿದೆ. ಜತೆಗೆ ಸ್ಥಳೀಯ ಯುವಜನತೆಗೆ ಉದ್ಯೋಗ ಖಾತ್ರಿ ದೊರೆಯಲಿದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಈ ಹಿಂದೆ ಜುಲೈ 9 ರಂದು ಮಧ್ಯಪ್ರದೇಶ ಸರ್ಕಾರ ಖಾಸಗಿ ಕಂಪನಿಗಳಿಲ್ಲ ಸ್ಥಳೀಯ ಯುವಜನತೆಗೆ ಶೇ. 70ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿತ್ತು. (ಏಜೆನ್ಸೀಸ್)